KGF Avinash; ಕನ್ನಡಕ್ಕಿಂತ ಬೇರೆ ಭಾಷೆಗಳಲ್ಲಿ ಹೆಚ್ಚು ಬ್ಯುಸಿಯಾದ ‘ಕೆಜಿಎಫ್‍’ ನಟ

ಕನ್ನಡದಲ್ಲಿ ಗಮನಸೆಳೆದ ಅದೆಷ್ಟೋ ನಟರು, ಕನ್ನಡದಲ್ಲೇ ಅವಕಾಶವಿಲ್ಲದೆ, ಬೇರೆ ಭಾಷೆಗಳ ಚಿತ್ರಗಳಲ್ಲಿ ಹೆಚ್ಚು ಬ್ಯುಸಿಯಾಗಿದ್ದಾರೆ. ಅಂಥವರ ಸಾಲಿನಲ್ಲಿ ‘ಕೆಜಿಎಫ್‍’ ಚಿತ್ರಗಳ ಖ್ಯಾತಿಯ ಅವಿನಾಶ್‍ (KGF Avinash) ಅಲಿಯಾಸ್‍ ಆ್ಯಂಡ್ರೂಸ್‍ ಸಹ ಒಬ್ಬರು. ಬೆಂಗಳೂರು ಮೂಲದ ಅವಿನಾಶ್‍, ‘ಕೆಜಿಎಫ್‍’ ಚಿತ್ರದಲ್ಲಿ ಆ್ಯಂಡ್ರೂಸ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರ ಯಶಸ್ವಿಯಾಗಿ ಅವಿನಾಶ್‍ ಸಹ ಗಮನಸೆಳೆದರು. ಆದರೆ, ಕನ್ನಡದಲ್ಲಿ ಅವರಿಗೆ ಅವಕಾಶಗಳು ಸಿಗುತ್ತಿಲ್ಲ. ‘ಕೆಜಿಎಫ್‍’ ನಂತರ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ನಟಿಸಿರುವ ಅವಿನಾಶ್‍, ಪರಭಾಷೆಯ ಚಿತ್ರಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ. ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ…

Read More

Firefly; ಡಾ. ರಾಜಕುಮಾರ್ ಹುಟ್ಟುಹಬ್ಬಕ್ಕೆ ಮೊಮ್ಮಗಳ ಗಿಫ್ಟ್; ಏ. 24ಕ್ಕೆ ‘ಫೈರ್ ಫ್ಲೈ’ ಬಿಡುಗಡೆ

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಡಾ. ರಾಜಕುಮಾರ್ ಮೊಮ್ಮಗಳು ಮತ್ತು ಶಿವರಾಜಕುಮಾರ್ ಮಗಳು ನಿವೇದಿತಾ ನಿರ್ಮಾಣದ ಮೊದಲ ಚಿತ್ರ ‘ಫೈರ್ ಫ್ಲೈ’ (Firefly) ಕಳೆದ ವರ್ಷ ಬಿಡುಗಡೆಯಾಗಬೇಕಿತ್ತು. ದೀಪಾವಳಿಗೆ ಚಿತ್ರ ಬಿಡುಗಡೆ ಎಂದು ಘೋಷಣೆಯೂ ಆಗಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರ ಬಿಡುಗಡೆಯಾಗಲಿಲ್ಲ. ಈಗ ಚಿತ್ರಕ್ಕೆ ಹೊಸ ಬಿಡುಗಡೆ ದಿನಾಂಕ ಸಿಕ್ಕಿದ್ದು, ಏಪ್ರಿಲ್‍ 24ರಂದು ಬಿಡುಗಡೆಯಾಗುತ್ತಿದೆ. ತಾತನ ಹುಟ್ಟುಹಬ್ಬದಂದು ಚಿತ್ರ ಬಿಡುಗಡೆ ಮಾಡಲು ಮೊಮ್ಮಗಳು ನಿರ್ಧರಿಸಿದ್ದಾರೆ. ನಿವೇದಿತಾ ತಮ್ಮ ಶ್ರೀ ಮುತ್ತು ಸಿನಿ ಸರ್ವೀಸಸ್ ಆಂಡ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ…

Read More

Muddu Rakshasi; ‘ಮುದ್ದು ರಾಕ್ಷಸಿ’ ಕಣ್ಣೀರು ಹಾಕಿದಾಗ; ಜೊತೆಗೆ ಕಾಣಿಸಿಕೊಂಡ ಚಂದನ್, ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಜೋಡಿ ಒಟ್ಟಿಗೆ ಇದ್ದ ಕಾಲದಲ್ಲಿ ಅವರಿಬ್ಬರೂ ನಾಯಕ-ನಾಯಕಿಯಾಗಿ ‘ಮುದ್ದು ರಾಕ್ಷಸಿ’ (Muddu Rakshasi) ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷ ಇಬ್ಬರೂ ವಿಚ್ಛೇದನ ಪಡೆದಿದ್ದಾಗಿದೆ. ಕಾರಣಾಂತರಗಳಿಂದ ತಡವಾದ ಚಿತ್ರ, ಇದೀಗ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ಇತ್ತೀಚೆಗೆ ಅಂಜನಾಪುರದಲ್ಲಿರುವ ವಜ್ರಮುನಿ ಎಸ್ಟೇಟ್‍ನಲ್ಲಿ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯಿತು. ಚಂದನ್‍ ಮತ್ತು ನಿವೇದಿತಾ ಇಬ್ಬರೂ ವಿದಾಯ ಹೇಳುವ ಸನ್ನಿವೇಶವನ್ನು ನಿರ್ದೇಶಕ ಪುನೀತ್ ಶ್ರೀನಿವಾಸ್‍ ಚಿತ್ರೀಕರಿಸಿಕೊಂಡರು. ವಿಚ್ಛೇದನ ನಂತರ ಮೊದಲ ಬಾರಿಗೆ ಚಂದನ್,…

Read More

Ganesh; ಗಣೇಶ್‍ ಹೊಸ ಚಿತ್ರಕ್ಕೆ ‘ಹನು ಮ್ಯಾನ್’ ಖ್ಯಾತಿಯ ಅಮೃತ ಅಯ್ಯರ್ ನಾಯಕಿ

ಸದ್ಯ ‘ಯುರ್ಸ್ ಸಿನ್ಸಿಯರ್ಲಿ ರಾಮ್‍’ ಮತ್ತು ‘ಪಿನಾಕ’ ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ಗಣೇಶ್‍, ಇದೀಗ ಹೊಸ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಗೀತರಚನೆಕಾರ ಮತ್ತು ಈ ಹಿಂದೆ `ಲವ್ ಇನ್ ಮಂಡ್ಯ’ ಚಿತ್ರವನ್ನು ನಿರ್ದೇಶಿಸಿದ್ದ ಅರಸು ಅಂತಾರೆ ನಿರ್ದೇಶನದ ಹೊಸ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. 2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಚಿತ್ರದಲ್ಲಿ ಗಣೇಶ್‍…

Read More