Karnataka Buget 2025: ಆಯ-ವ್ಯಯದಲ್ಲಿ ಸಿನಿಮಾಕ್ಕೆ ಸಿಕ್ಕಿದ್ದೆಷ್ಟು?

ಬೆಂಗಳೂರು: ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ, ಕೈಗಾರಿಕಾ ನೀತಿಯಡಿ ಈ ಬಾರಿಯ ಬಜೆಟ್‌ನಲ್ಲಿ ಚಲನ ಚಿತ್ರ ಕ್ಷೇತ್ರಕ್ಕೆ ಹಲವು ಕೊಡುಗೆಗಳನ್ನು ಸರ್ಕಾರ ಘೋಷಿಸಿದೆ. (Karnataka Buget 2025) ರಾಜ್ಯದ ಮಲ್ಟಿಪ್ಲೆಕ್ಸ್‌ಗಳೂ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು ₹200ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿಯು ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರ ಸಮುಚ್ಚಯವನ್ನು ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ….

Read More

Arjun Sarja; ತ್ರಿಭಾಷೆಯಲ್ಲಿ ಸೀತಾ ಪಯಣ; ನಿರ್ದೇಶನದ ಜೊತೆ ನಿರ್ಮಾಣಕ್ಕೂ ಕೈಹಾಕಿದ ಅರ್ಜುನ್‌ ಸರ್ಜಾ

ಅರ್ಜುನ್‌ ಸರ್ಜಾ (Arjun Sarja) ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಮಗಳು ಐಶ್ವರ್ಯ ಸರ್ಜಾ ಅಭಿನಯದ ‘ಸೀತಾ ಪಯಣ’ (Seetha Payana) ಚಿತ್ರದ ನಿರ್ದೇಶನ ಹಾಗೂ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‌ (Niranjan) ನಾಯಕ ನಾಟಕನಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.‘ಜೈ ಹಿಂದ್’, ‘ಅಭಿಮನ್ಯು’ ಮತ್ತು ‘ಪ್ರೇಮಬರಹ’ ಸಿನಿಮಾಗಳನ್ನು ಅರ್ಜುನ್‌ ಸರ್ಜಾ ನಿರ್ದೇಶನ ಮಾಡಿದ್ದರು. ‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ….

Read More

School Leader; ಪೆನ್ಸಿಲ್ ಬಾಕ್ಸ್ ನಿರ್ದೇಶಕ ರಝಾಕ್ ಪತ್ತೂರು ಅವರ `ಸ್ಕೂಲ್ ಲೀಡರ್’ ತೆರೆಗೆ ಬರಲು ಸಿದ್ಧ

ಸನ್ ಮ್ಯಾಟ್ರಿಕ್ಸ್ ಬ್ಯಾನರಿನಲ್ಲಿ ತಯಾರಾದ ಕೆ. ಸತ್ಯೇಂದ್ರ ಪೈ ನಿರ್ಮಾಣದ ಸ್ಕೂಲ್ ಲೀಡರ್ (School Leader) ಕನ್ನಡ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿಂದೆ ಬಿಡುಗಡೆಗೊಂಡು ಯಶಸ್ವಿಯಾದ ಪೆನ್ಸಿಲ್ ಬಾಕ್ಸ್ (Pencil Box) ಎಂಬ ಚಿತ್ರದ ನಿರ್ದೇಶಕರಾದ ರಝಾಕ್ ಪತ್ತೂರು (Razak Puttur) ಇವರು ಸ್ಕೂಲ್ ಲೀಡರ್ ಚಿತ್ರವನ್ನು ಕತೆ, ಚಿತ್ರ ಕತೆ, ಸಂಭಾಷಣೆ ಜೊತೆಗೆ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಸ್ಕೂಲ್ ಲೀಡ‌ರ್ ಸಿನಿಮಾ ಹೈಸ್ಕೂಲ್ ಮಕ್ಕಳ ಮನೋ ವಿಕಾಸ,…

Read More

Darshan Devil; ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಚಿತ್ರೀಕರಣ ಪ್ರಾರಂಭ..!

ದರ್ಶನ್‌ ಅಭಿನಯದ ಕಾಟೇರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಅದರ ಬೆನ್ನಲ್ಲೇ ಡಿ ಬಾಸ್‌ ದರ್ಶನ್‌ ‘ಡೆವಿಲ್- ದಿ ಹೀರೋ’ ಚಿತ್ರವನ್ನು ಒಪ್ಪಿಕೊಂಡಿದ್ದರು. ದರ್ಶನ ಅಭಿನಯ ಡೆವಿಲ್‌ ಚಿತ್ರದ ಮೇಲೆಯೂ ನಿರೀಕ್ಷೆ ಬಹಳಾ ಇತ್ತು. ಪ್ಯಾನ್‌ ಇಂಡಿಯಾ ಸಿನಿಮಗಳ ರೀತಿ ದೊಡ್ಡ ಮಟ್ಟದಲ್ಲಿ ನಿರ್ಮಾಣಕ್ಕೆ ಚಿಂತಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದಾಗಿ ಚಿತ್ರೀಕರಣ ನಿಂತಿತ್ತು. ಈಗ ‘ಡೆವಿಲ್- ದಿ ಹೀರೋ’ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕ ಪ್ರಕಾಶ್ ವೀರ್ ಸಜ್ಜಾಗಿದ್ದಾರೆ. ಡೆವಿಲ್‌ನ ಚಿತ್ರೀಕರಣ 2024ರ ಮಾರ್ಚ್‌ನ‌ಲ್ಲಿ ಪ್ರಾರಂಭವಾಗಿತ್ತು. ಆದರೆ,…

Read More