Karnataka bandh tomorrow, March 22; ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಬೆಂಬಲ; ಬೆಳಗಿನ ಪ್ರದರ್ಶನ ರದ್ದು

ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಲು ಹೊರಟಿರುವ ಕನ್ನಡ ಪರ ಸಂಘಟನೆಗಳು, ಮಾರ್ಚ್ 22 ರಂದು ಕರ್ನಾಟಕ ಬಂದ್ (Karnataka Bandh) ಗೆ ಕರೆ ಕೊಟ್ಟಿವೆ. ಈ ಬಂದ್ಗೆ ಕನ್ನಡ ಚಿತ್ರರಂಗ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ.
ಈ ಕುರಿತು ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce (KFCC) ಅಧ್ಯಕ್ಷ ನರಸಿಂಹಲು, ಕನ್ನಡ ಚಿತ್ರರಂಗ ಕರ್ನಾಟಕ ಬಂದ್ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ಬಂದ್ (Karnataka Bandh) ಗೆ ಚಿತ್ರರಂಗದ ಬೆಂಬಲ ಇರಲಿದೆಯಾದರೂ ಸಿನಿಮಾ ಚಿತ್ರೀಕರಣಗಳನ್ನು ನಿಲ್ಲಿಸಲಾಗುತ್ತಿಲ್ಲ. ಚಿತ್ರಪ್ರದರ್ಶಕರು ಸಹ ಬಂದ್ಗೆ ತಮ್ಮ ಬೆಂಬಲ ನೀಡಿದ್ದು, ಶನಿವಾರದ ಬೆಳಗಿನ ಪ್ರದರ್ಶನವನ್ನು ನಿಲ್ಲಿಸುತ್ತಿದ್ದಾರೆ. ಆದರೆ, ಮಧ್ಯಾಹ್ನದ ನಂತರ ಎಂದಿನಂತೆ ಪ್ರದರ್ಶನ ಮುಂದುವರೆಯಲಿದೆ.
ಈ ಕುರಿತು ಮಾತನಾಡಿರುವ ನರಸಿಂಹಲು, ‘ಡಾ. ರಾಜ್ ಅವರ ಕಾಲದಿಂದಲೂ ಕನ್ನಡ ನೆಲ, ಜಲ, ಭಾಷೆಗೆ ಕುತ್ತು ಬಂದಾಗ ಚಿತ್ರರಂಗ ಬೆಂಬಲ ನೀಡುತ್ತಾ ಬಂದಿದೆ. ಈಗ ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿರುವ ಈ ಬಂದ್ಗೆ ಚಿತ್ರರಂಗದ ಎಲ್ಲಾ ವಲಯಗಳ ಬೆಂಬಲವಿದೆ. ಚಿತ್ರೀಕರಣಕ್ಕೆ ಯಾವುದೇ ಕಡಿವಾಣ ಇರುವುದಿಲ್ಲ. ಆದರೆ, ಚಿತ್ರ ತಂಡಗಳು ಅಥವಾ ನಿರ್ಮಾಪಕರು ಸ್ವಯಂಪ್ರೇರಿತವಾಗಿ ಚಿತ್ರೀಕರಣ ಬಂದ್ ಮಾಡಿದರೆ ಅದಕ್ಕೆ ನಮ್ಮ ಸ್ವಾಗತವಿದೆ. ಕಲಾವಿದರ ಸಂಘ, ನಿರ್ಮಾಪಕರ ಸಂಘವೂ ಸಹ ಬೆಂಬಲ ವ್ಯಕ್ತಪಡಿಸಿವೆ’ ಎಂದು ಹೇಳಿದ್ದಾರೆ.
ಈ ಶುಕ್ರವಾರ ‘ನಾರಾಯಣ ನಾರಾಯಣ (Narayan Narayan )’, ‘ಬರ್ಗೆಟ್ ಬಸ್ಯಾ’ (Barget Basya), ‘ಯಾಳ್ವಿ’ ಮುಂತಾದ ಕನ್ನಡ ಚಿತ್ರಗಳು ಬಿಡುಗಡೆಯಾಗುತ್ತಿದ್ದು, ಈ ಬಂದ್ನಿಂದ ಕನ್ನಡ ಚಿತ್ರಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ.
karnataka bandh tomorrow what is open what is closed?
ಮಾರ್ಚ್ 22 ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ತನಕ ಬಂದ್ ಮಾಡಲು ಕನ್ನಡಪರ ಸಂಘಟನೆಗಳು ಉದ್ದೇಶಿಸಿವೆ. ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಟೌನ್ಹಾಲಿನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿದೆ. ಬಂದ್ ವೇಳೆ ಬಸ್, ಆಟೋ, ವಾಹನಗಳ ಸಂಚಾರ ಬಂದ್ ಆಗಬೇಕು ಎಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.
-
ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘Eltuu Muthaa’
ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ, ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು ಟೀಸರ್ ಬಿಡಗುಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ….
-
ಕಾಡಿನ ನೆಂಟರು ಕಥಾ ಸಂಕಲನ ಆಧರಿತ ಚಿತ್ರ Timmana Mottegalu; ಟ್ರೈಲರ್ ನೋಡಿದ್ರಾ..
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಜೂನ್ 27ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರದ ತಾರಾಗಣದಲ್ಲಿ ಶೃಂಗೇರಿಯ ಕೇಶವ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಆಶಿಕಾ ಸೋಮಶೇಖರ್, ಶೃಂಗೇರಿ ರಾಮಣ್ಣ, ಪ್ರಗತಿ ಪ್ರಭು, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ, ಪೃಥ್ವಿರಾಜ್ ಕೊಪ್ಪ ಮತ್ತು ಪ್ರಾಣೇಶ್ ಕುಳೇಗದ್ದೆ ಇದ್ದಾರೆ. ಚಿತ್ರಕ್ಕೆ ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕೆಂಪರಾಜು ಬಿಎಸ್ ಅವರ ಸಂಕಲನ ಮತ್ತು ಹೇಮಂತ್ ಜೋಯಿಸ್ ಅವರ ಸಂಗೀತ…
-
ಹಸು, ಹುಲಿಯಾದ ಕಥೆ ‘Maarnami’; ಟೀಸರ್ ಬಿಡುಗಡೆ
‘ಗಿಣಿರಾಮ’ ಧಾರಾವಾಹಿಯಲ್ಲಿ ಗಮನಸೆಳೆದಿದ್ದ ರಿತ್ವಿಕ್ ಮಾತಾಡ್, ಇದೀಗ ಹಿರಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ (Maarnami) ಚಿತ್ರದಲ್ಲಿ ಅವರು ನಾಯಕನಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ವಿಶೇಷವೆಂದರೆ, ಇತ್ತೀಚೆಗೆ ರಿತ್ವಿಕ್ ಹುಟ್ಟುಹಬ್ಬದಂದೇ ಟೀಸರ್ ಬಿಡುಗಡೆ ಆಗಿದೆ. ‘ಸಿಂಪಲ್’ಸ ಸುನಿ ಮತ್ತು ಕಾರ್ತಿಕ್ ಮಹೇಶ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ‘ಮಾರ್ನಮಿ’ ಚಿತ್ರವನ್ನು ಗುಣಾಧ್ಯ ಪ್ರೊಡಕ್ಷನ್ಸ್ ಬ್ಯಾನರ್ ಅಡಿ, ಶಿಲ್ಪಾ ನಿಶಾಂತ್ ನಿರ್ಮಿಸಿದ್ದಾರೆ. ರಿತ್ವಿಕ್ಗೆ ನಾಯಕಿಯಾಗಿ ಚೈತ್ರಾ ಆಚಾರ್ ನಟಿಸಿದ್ದು, ಸೋನು ಒಂದು ಪ್ರಮುಖ ಪಾತ್ರದಲ್ಲಿ…
(Karnataka Bandh 2025: What’s Open, What’s Closed & Impact on Kannada Film Industry. The Karnataka Bandh 2025 is scheduled for tomorrow, bringing potential disruptions across the state. As protests intensify, many are wondering about Karnataka bandh tomorrow—what is open, what is closed? From public transport to cinemas, here’s a comprehensive update on the bandh and how it may affect the Kannada film industry.)