Eddelu-Manjunatha-2-Kittoda-Prema

Eddelu Manjunatha 2; ಫೆ. 21ಕ್ಕೆ ಗುರುಪ್ರಸಾದ್‍ ನಿರ್ದೇಶನದ ಕೊನೆಯ ಸಿನಿಮಾ ಬಿಡುಗಡೆ

ಕಳೆದ ವರ್ಷ ನಿಧನರಾದ ನಿರ್ದೇಶಕ ಗುರುಪ್ರಸಾದ್‍, ಅವರ ಕೊನೆಯ ಚಿತ್ರ ಜಗ್ಗೇಶ್‍ ಅಭಿನಯದ ‘ರಂಗನಾಯಕ’ ಎಂಬ ನಂಬಿಕೆ ಎಲ್ಲರಲ್ಲೂ ಇದೆ. ಆದರೆ, ಅದು ತಪ್ಪು. ‘ರಂಗನಾಯಕ’ಕ್ಕೂ ಮೊದಲೇ ಗುರುಪ್ರಸಾದ್‍ ಸದ್ದಿಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಗುರುಪ್ರಸಾದ್‍ ನಿಧನರಾಗುವುದಕ್ಕೆ ಕೆಲವು ದಿನಗಳ ಹಿಂದೆ ಚಿತ್ರದ ಡಬ್ಬಿಂಗ್‍ ಸಹ ಮಾಡಿ ಮುಗಿಸಿದ್ದರು. ಆದರೆ, ಅದರ ಬಿಡುಗಡೆಗೂ ಮೊದಲೇ ಆತ್ಮಹತ್ಯೆಗೆ ಶರಣಾದರು. ಈಗ ಅವರ ಅನುಪಸ್ಥಿತಿಯಲ್ಲಿ, ಆ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಫೆಬ್ರವರಿ 21ರಂದು ರಾಜ್ಯಾದ್ಯಂತ ಚಿತ್ರ ಬಿಡುಗಡೆಯಾಗುತ್ತಿದೆ. ಅಂದಹಾಗೆ,…

Read More
Ramesh Arvind's 106th film titled Daiji

Ramesh Aravind as Daiji; ಘೋಷಣೆಯಾಗಿ ಒಂದೂವರೆ ವರ್ಷಗಳ ನಂತರ ‘ದೈಜಿ’ ಪ್ರಾರಂಭ

ರಮೇಶ್‌ ಅರವಿಂದ್ ಅಭಿನಯದ ‘ದೈಜಿ’ ಚಿತ್ರವು ಸುಮಾರು ಒಂದೂವರೆ ವರ್ಷಗಳ ಹಿಂದೆ ಘೋಷಣೆಯಾಗಿತ್ತು. ಆದರೆ, ಚಿತ್ರ ಮಾತ್ರ ಪ್ರಾರಂಭವಾಗಿರಲಿಲ್ಲ. ಚಿತ್ರದ ಬಹುತೇಕ ಚಿತ್ರೀಕರಣ ಲಂಡನ್‍ನಲ್ಲಿ ನಡೆಯುವುದರಿಂದ ಮತ್ತು ಚಿತ್ರತಂಡಕ್ಕೆ ವೀಸಾ ಸಿಗುವುದಕ್ಕೆ ವಿಳಂಬವಾಗಿದ್ದರಿಂದ, ಚಿತ್ರೀಕರಣ ಶುರುವಾಗಿರಲಿಲ್ಲ. ಇದೀಗ ಕೊನೆಗೂ ‘ದೈಜಿ’ ಚಿತ್ರಕ್ಕೆ ಮುಹೂರ್ತವಾಗಿದೆ. ಭಾನುವಾರದ ಬೆಳಗಿನ ಸುಮುಹೂರ್ತದಲ್ಲಿ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇದು ರಮೇಶ್‍ ಅರವಿಂದ್‍ ಅಭಿನಯದ 106ನೇ ಚಿತ್ರವಾಗಿದ್ದು, ಈ ಹಿಂದೆ ‘ಶಿವಾಜಿ ಸುರತ್ಕಲ್‍’ ಮತ್ತು ‘ಶಿವಾಜಿ ಸುರತ್ಕಲ್‍…

Read More
Sanju Weds Geetha 2

‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡಕ್ಕೀಗ ನಿರಾಳ; ತಡೆಯಾಜ್ಞೆ ತೆರವು ಗೊಳಿಸಿದ ನ್ಯಾಯಲಯ

ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್‍ ಅಭಿನಯದ ‘ಸಂಜು ವೆಡ್ಸ್ ಗೀತಾ 2’ ಚಿತ್ರಕ್ಕೆದುರಾದ ಸಂಕಷ್ಟ ಇದೀಗ ಬಗೆಹರಿದಿದೆ. ಚಿತ್ರವು ಶುಕ್ರವಾರ (ಜನವರಿ 10) ಬಿಡುಗಡೆ ಆಗಬೇಕಿತ್ತು. ಆದರೆ, ಹೈದರಾಬಾದ್‍ನ ನ್ಯಾಯಾಲಯವು ಚಿತ್ರದ ಬಿಡುಗಡೆ ಮೇಲೆ ತಡೆಯಾಜ್ಞೆ ನೀಡಿದ್ದರಿಂದ, ಚಿತ್ರವು ಅಂದುಕೊಂಡಂತೆ ಬಿಡುಗಡೆ ಆಗಲಿಲ್ಲ. ಇದೀಗ ನ್ಯಾಯಲಯವು ತಡೆಯಾಜ್ಞೆನ್ನು ತೆರವುಗೊಳಿಸಿದ್ದು, ಸಮಸ್ಯೆ ಎದುರಾದಷ್ಟೇ ಬೇಗ ಪರಿಹಾರವೂ ಸಿಕ್ಕಿದೆ. ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ‘ಸಂಜು ವೆಡ್ಸ್ ಗೀತಾ 2’ ಚಿತ್ರತಂಡ ನಿರಾಳವಾಗಿದ್ದು, ಸದ್ಯದಲ್ಲೇ ಚಿತ್ರದ ಹೊಸ…

Read More
Actor Kishore

BIFFESನ ರಾಯಭಾರಿಯಾಗಿ ನಟ ಕಿಶೋರ್ ನೇಮಕ

ಕೆಲವೇ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾಗೋಷ್ಠಿ ಮಾಡಿ, ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಕುರಿತಾಗಿ ಒಂದಿಷ್ಟು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಇದೀಗ ಚಿತ್ರೋತ್ಸವ ಸಮಿತಿಯಿಂದ ಇನ್ನೊಂದು ಸುದ್ದಿ ಬಂದಿದ್ದು, ನಟ ಕಿಶೋರ್‍ ಈ ಬಾರಿ ಚಿತ್ರೋತ್ಸವದ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಕನ್ನಡ ಮೂಲದ ಕಿಶೋರ್‍, ತೆಲುಗು ಮತ್ತು ತಮಿಳು ಸೇರಿದಂತೆ ಬೇರೆ ಭಾಷೆಯ ಚಿತ್ರಗಳಲ್ಲೂ ತಮ್ಮ ಪ್ರತಿಭೆಯಿಂದ ಹೆಸರು ಮಾಡಿದವರು. ಇದೀಗ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಕಳೆದ ಬಾರಿ ನಟ ಧನಂಜಯ್‍ ರಾಯಭಾರಿಯಾಗಿದ್ದು,…

Read More