Vinodh Rajkumar; ಲೀಲಾವತಿ ಸ್ಮಾರಕ ಭವನದಲ್ಲಿ ‘ಶಾಲೆ’ ಪ್ರಾರಂಭ

ಕಳೆದ ತಿಂಗಳು ನಟಿ ಲೀಲಾವತಿ ಅವರ ಸ್ಮಾರಕ ಉದ್ಘಾಟನೆಯಾಗಿದ್ದು ನೆನಪಿರಬಹುದು. ಸೋಲದೇವನಹಳ್ಳಿಯ ತಮ್ಮ ಜಮೀನಿನಲ್ಲಿ ತಾಯಿಯ ಸ್ಮಾರಣಾರ್ಥ ಈ ಸ್ಮಾರಕವನ್ನು ವಿನೋದ್ ರಾಜ್‍ ಕಟ್ಟಿಸಿದ್ದಾರೆ. ಈಗ ಡಾ. ಲೀಲಾವತಿ ಸ್ಮಾರಕ ಭವನದಲ್ಲಿ ಸದ್ದಿಲ್ಲದೆ ಒಂದು ಚಿತ್ರದ ಮುಹೂರ್ತ ನೆರವೇರಿದೆ. ಅದೇ ‘ಶಾಲೆ’. ಶ್ರೀ ಕನ್ನಡಾಂಬೆ ಮೂವೀಸ್ ಬ್ಯಾನರ್ ಅಡಿಯಲ್ಲಿ ಮಂಜುನಾಥ್ ಬಿ.ಆರ್ ನಿರ್ದೇಶಿಸುತ್ತಿರುವ, ನಾಗು ಶ್ರೀ ಎಸ್.ಎನ್. ನಿರ್ಮಾಣದ ಚಿತ್ರ ‘ಶಾಲೆ’. ಈ ಚಿತ್ರದ ಮುಹೂರ್ತ ಲೀಲಾವತಿ ಸ್ಮಾರಕದಲ್ಲಿ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ವಿನೋದ್ ರಾಜ್‍…

Read More

C. M. Siddaramaiah; ‘I Am god’ ಎಂದ ರವಿ ಗೌಡಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ

 ಮುಖ್ಯಮಂತ್ರಿ ಸಿದ್ದರಾಮಯ್ಯ(C. M Siddaramaiah) ಸಿನಿಮಾ ಸಮಾರಂಭಗಳಿಗೆ ಬರುವುದು ಕಡಿಮೆಯೇ. ಇದೀಗ ಅವರು ತಮ್ಮ ಆಪ್ತರೊಬ್ಬರ ಸಿನಿಮಾ ಸಮಾರಂಭದಲ್ಲಿ ಭಾಗವಹಿಸಿ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.  ಸಿದ್ದರಾಮಯ್ಯ ಅವರ ಆತ್ಮೀಯ ಗೆಳೆಯರಾದ ಮುಡಾ ಮಾಜಿ ಅಧ್ಯಕ್ಷ ಸಿ. ಬಸವೇಗೌಡ (C. Basavegouda) ಅವರ ಮಗನ ಹೊಸ ಪಯಣಕ್ಕೆ ಶುಭಾಶಯ ಕೋರಿದ್ದಾರೆ. ಈ ಹಿಂದೆ ‘ಧ್ವಜ’ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದ ರವಿ ಗೌಡ, ‘I Am god’ ಎಂಬ…

Read More

Priyanka Achar; ರಾಣಗೆ ನಾಯಕಿಯಾದ ‘ಮಹಾನಟಿ’ ವಿಜೇತೆ ಪ್ರಿಯಾಂಕಾ ಆಚಾರ್

ರಕ್ಷಿತಾ (Rakshita) ಸಹೋದರ ರಾಣ, ‘ಏಕ್‍ ಲವ್‍ ಯಾ’ ಚಿತ್ರದ ನಂತರ ತರುಣ್ ಸುಧೀರ್ (Tarun Sudheer) ಮತ್ತು ಅಟ್ಲಾಂಟ ನಾಗೇಂದ್ರ (Atlanta Nagendra) ನಿರ್ಮಾಣದ ಹೊಸ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಗೊತ್ತೇ ಇದೆ. ಈ ಚಿತ್ರಕ್ಕೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಈಗ ಈ ಚಿತ್ರಕ್ಕೆ ನಾಯಕಿಯಾಗಿ ಪ್ರಿಯಾಂಕಾ ಆಚಾರ್ (Priyanka Achar) ಆಯ್ಕೆಯಾಗಿದ್ದಾರೆ. ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆ’ ಎಂಬ ಟ್ಯಾಗ್‍ಲೈನ್‍ ಇರುವ ಈ ಚಿತ್ರಕ್ಕೆ ಪುನೀತ್‍ ರಂಗಸ್ವಾಮಿ…

Read More
sarkari Nyaya Bele angadi

Ragini Dwivedi; ಸೋಮನಹಳ್ಳಿಯಲ್ಲಿ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ತೆರೆಯುತ್ತಿದ್ದಾರಂತೆ ರಾಗಿಣಿ

ಗೀತಪ್ರಿಯ ಅಭಿನಯದ ‘ತಾಯವ್ವ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಸಾತ್ವಿಕ್‌ ಪವನ್‍ ಕುಮಾರ್‌ (Satvik Pavan Kumar) ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಛಾಯಾಗ್ರಹಣ ಮತ್ತು ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ, ಇದುವರೆಗೂ ಸಾಕಷ್ಟು ಗ್ಲಾಮರಸ್‍ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಾಗಿಣಿ ದ್ವಿವೇದಿ, (Ragini Dwivedi) ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ಪಕ್ಕಾ ಹಳ್ಳಿ ಹುಡುಗಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.  ಈಗಾಗಲೇ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಬಹುತೇಕ ಸ್ಕ್ರಿಪ್ಟ್‌ ಕೆಲಸಗಳು ಪೂರ್ಣಗೊಂಡಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸಿನೆಮಾದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದೆ….

Read More