Nenapirali-Pream-Sharanya-Shetty

Sharanya Shetty; ‘ನೆನಪಿರಲಿ’ ಪ್ರೇಮ್‍ ಹೊಸ ಚಿತ್ರಕ್ಕೆ ಶರಣ್ಯ ಶೆಟ್ಟಿ ನಾಯಕಿ

ಶರಣ್ಯ ಶೆಟ್ಟಿ (Sharanya Shetty) ಇದುವರೆಗೂ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’, ‘ಫಾರೆಸ್ಟ್’ ಮುಂತಾದ ಚಿತ್ರಗಳೆಲ್ಲಾ ಬಹುನಾಯಕಿಯರ ಚಿತ್ರವಾಗಿತ್ತು. ಇದೀಗ ಅವರು ಮೊದಲ ಬಾರಿಗೆ ಒಂಟಿ ನಾಯಕಿಯಾಗಿ ಆಯ್ಕೆಯಾಗಿದ್ದು, ‘ನೆನಪಿರಲಿ’ ಪ್ರೇಮ್‍’ (Nenapirali Prem) ಎದುರು ಹೊಸ ಚಿತ್ರವೊಂದರಲ್ಲಿ ಅವರು ನಾಯಕಿಯಾಗಿ ಆಯ್ಕೆಯಾಗಿರುವುದು ವಿಶೇಷ. ಕಳೆದ ವರ್ಷ ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಚಿತ್ರದ ಮುಹೂರ್ತವಾಗಿತ್ತು. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಶತ್ರು’ ಚಿತ್ರದಲ್ಲಿ ಅವರು ಮಾಸ್‍ ಅವತಾರದಲ್ಲಿ ಕಾಣಿಸಿಕೊಂಡಿದ್ದರು. ಈಗ ಈ ಚಿತ್ರದಲ್ಲಿ ಅವರು ಪುನಃ…

Read More
Siddaramaiah-Meets-Shivarajkumar

Siddaramaiah Meets Shivarajkumar; ಶಿವರಾಜಕುಮಾರ್ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಡಿಸೆಂಬರ್‌ ತಿಂಗಳಲ್ಲಿ ಶಸ್ತ್ರಚಿಕಿತ್ಸೆಗೆಂದು ಅಮೇರಿಕಾಗೆ ಹೋಗಿದ್ದ ಶಿವರಾಜಕುಮಾರ್‌, ಭಾನುವಾರವಷ್ಟೇ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಅವರನ್ನು ಚಿತ್ರರಂಗದವರು, ಅಭಿಮಾನಿಗಳು ಮತ್ತು ಹಿತೈಷಿಗಳು ಭವ್ಯವಾಗಿ ಬರಮಾಡಿಕೊಂಡಿದ್ದಾರೆ. ಶಿವರಾಜಕುಮಾರ್‌ ಇದೀಗ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಕ್ಯಾನ್ಸರ್‍ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮಧ್ಯೆ, ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಶಿವರಾಜಕುಮರ್‌ ( Shivarajkumar) ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಶಿವರಾಜಕುಮಾರ್ ಮನೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ, ಕೆಲವು ಸಮಯ ಅವರ ನಿವಾಸದಲ್ಲಿ ಕಳೆಯುವುದರ ಜೊತೆಗೆ ಆದಷ್ಟು ಬೇಗ ಗುಣಮುಖರಾಗಿ ಎಂದು…

Read More
Anant Nag gets Padma Bhushan

Anant Nag ; ಪದ್ಮಶ್ರೀಗಿಂತ ದೊಡ್ಡ ಪ್ರಶಸ್ತಿಯೇ ಸಿಕ್ಕಿತು ಅನಂತ್‍ ನಾಗ್‍ ಅವರಿಗೆ

ಅನಂತ್ ನಾಗ್‍ ಅವರಿಗೆ ಪದ್ಮಶ್ರೀ ಪ್ರಶಸ್ತಿ ಬರಬೇಕೆಂದು ಕೆಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಇದ್ದರು. ಈಗ ಪದ್ಮಶ್ರೀಗಿಂತ ದೊಡ್ಡ ಪ್ರಶಸ್ತಿಯೊಂದು ಅನಂತ್‍ ನಾಗ್‍ ಅವರಿಗೆ ಸಿಕ್ಕಿದೆ. ಶನಿವಾರ, ಪದ್ಮ ಪ್ರಶಸ್ತಿಗಳ ಘೋಷಣೆಯಾಗಿದ್ದು, ಅನಂತ್‍ ನಾಗ್‍ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರವು ಘೋಷಿಸಿದೆ. ಕಡಿಮೆ ಅನುಭವ ಮತ್ತು ಕಡಿಮೆ ಚಿತ್ರಗಳನ್ನು ಮಾಡುವವರನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಗಳನ್ನು ನೀಡುವ ಸಂದರ್ಭದಲ್ಲಿ, ಕನ್ನಡದಲ್ಲಿ ನಿಜವಾದ ಸಾಧಕರಿಗೂ ಪದ್ಮ ಪ್ರಶಸ್ತಿಗಳು ಬಾರದಿರುವುದಕ್ಕೆ ಸಣ್ಣ ಬೇಸರವಿತ್ತು. ಅದರಲ್ಲೂ ಕನ್ನಡದಲ್ಲಿ ಅನಂತ್ ನಾಗ್‍, ದ್ವಾರಕೀಶ್‍,…

Read More
Chikkanna-new film director-producer-AP-Arjuns-Lakshmiputra

Chikkanna; ಕರೊನಾ ಸಮಯದಲ್ಲಿ ಹುಟ್ಟಿಕೊಂಡ ತಾಯಿ-ಮಗನ ಕಥೆ ‘ಲಕ್ಷ್ಮೀಪುತ್ರ’

ಕೆಲವು ದಿನಗಳ ಹಿಂದೆ ಚಿಕ್ಕಣ್ಣ ಅಭಿನಯದಲ್ಲಿ ‘ಲಕ್ಷ್ಮೀಪುತ್ರ’ ಎಂಬ ಚಿತ್ರವನ್ನು ಘೋಷಿಸಿದ್ದರು ಎ.ಪಿ. ಅರ್ಜುನ್‍. ಈಗ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ಬೆಂಗಳೂರಿನಲ್ಲಿ ನೆರವೇರಿದೆ. ನಾಗರಬಾವಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತವಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಎ.ಪಿ. ಅರ್ಜುನ್ ಫಿಲಂಸ್ ಅಡಿಯಲ್ಲಿ ಈ ಚಿತ್ರವನ್ನು ಅರ್ಜುನ್‍ ಪತ್ನಿ ನಿರ್ಮಿಸಿದರೆ, ಅರ್ಜುನ್‍ ಚಿತ್ರಗಳಿಗೆ ಕೆಲಸ ಮಾಡಿದ್ದ ವಿಜಯ್‍ ಸ್ವಾಮಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಎ.ಪಿ. ಅರ್ಜುನ್‍ ಕಥೆ ಬರೆದಿದ್ದಾರಂತೆ. ‘ಲಕ್ಷ್ಮೀಪುತ್ರ’ ಚಿತ್ರವು…

Read More