
ಬ್ರಹ್ಮಚಾರಿಗಳ ಜೀವನದ ಕುರಿತು ‘ಬ್ಯಾಚುಲರ್ಸ್ ಬದುಕು’ ಹಾಡು ಬಿಡುಗಡೆ
‘ಅಪಾಯವಿದೆ ಎಚ್ಚರಿಕೆ’ ಚಿತ್ರವನ್ನು ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ. ಗೌಡ ನಿರ್ಮಾಣ ಮಾಡಿದ್ದಾರೆ. ಸುನಾದ್ ಗೌತಮ್ ಚಿತ್ರಕ್ಕೆ ಸಂಗೀತ ಸಂಯೋಜಿಸಿವುದರ ಜೊತೆಗೆ ಛಾಯಾಗ್ರಹಣವನ್ನು ಮಾಡಿದ್ದಾರೆ. ಚಿತ್ರದಲ್ಲಿ ವಿಕಾಶ್ ಉತ್ತಯ್ಯ, ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ರಾಧಾ ಭಗವತಿ ಮುಂತಾದವರು ನಟಿಸಿದ್ದಾರೆ. ಈ ಹಾಡಿನ ಕುರಿತು ಮಾತನಾಡಿದ ಅಭಿಜಿತ್, ’10 ವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳುಳ್ಳ ಚಿತ್ರ….