‘Kantara ಅಧ್ಯಾಯ 1’ ಚಿತ್ರಕ್ಕೆ Rukmini Vasanth ನಾಯಕಿ?

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘Kantara ಅಧ್ಯಾಯ 1’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ. ಈ ಮಧ್ಯೆ, ಚಿತ್ರತಂಡವು ಚಿತ್ರೀಕರಣ ಮುಗಿದ ಖುಷಿಯಲ್ಲಿ ಒಂದು ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿ, ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ಧನ್ಯವಾದ ತಿಳಿಸಿದೆ.
ಈ ಮಧ್ಯೆ, ಚಿತ್ರದಲ್ಲಿ ಯಾರೆಲ್ಲಾ ನಟಿಸಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಮಾಧ್ಯಮದವರ ಹತ್ತಿರ ಮಾತನಾಡುವ ಸಂದರ್ಭದಲ್ಲಿ, ಚಿತ್ರದಲ್ಲಿ ನಟಿಸಿರುವುದಾಗಿ ಅಚ್ಯುತ್ ಕುಮಾರ್ ಹೇಳಿದ್ದರು. ಅವರು ‘ಕಾಂತಾರ’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ಈ ಚಿತ್ರದಲ್ಲೂ ಕಾಣಿಸಿಕೊಂಡಿದ್ದಾರಂತೆ. ಮಿಕ್ಕಂತೆ ಯಾರೆಲ್ಲಾ ನಟಿಸಿದ್ದಾರೆ ಎಂದು ಚಿತ್ರತಂಡದವರು ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಿರುವಾಗಲೇ, ರುಕ್ಮಿಣಿ ವಸಂತ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿದೆ.
ರುಕ್ಮಿಣಿ, ‘ಕಾಂತಾರ – ಚಾಪ್ಟರ್ 1’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಈ ಕುರಿತು ಅವರಾಗಲೀ, ಚಿತ್ರತಂಡದವರಾಗಲೀ ಖಚಿತಪಡಿಸಿಲ್ಲ. ಹೀಗಿರುವಾಗಲೇ ‘ಕಾಂತಾರ – ಚಾಪ್ಟರ್ 1’ ಚಿತ್ರಕ್ಕೆ ಅವರು ನಾಯಕಿಯಾಗಿದ್ದಾರೆ ಎಂಬ ಮಾತು ಮೇಕಿಂಗ್ ವೀಡಿಯೋ ಬಿಡುಗಡೆಯಾದ ದಿನದಿಂದ ಮತ್ತೊಮ್ಮೆ ಕೇಳಿಬರುತ್ತಿದೆ. ಇದರಲ್ಲಿ ಎಷ್ಟು ನಿಜ, ಎಷ್ಟು ಸುಳ್ಳು ಎಂಬುದನ್ನು ಚಿತ್ರತಂಡದವರೇ ಖಚಿತಪಡಿಸಬೇಕು.
‘ಕಾಂತಾರ – ಅಧ್ಯಾಯ 1’ ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕಿರಗಂದೂರು ನಿರ್ಮಿಸುತ್ತಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಕುಂದಾಪುರ ಬಳಿ ದೊಡ್ಡ ಸ್ಟುಡಿಯೋ ಮಾಡಿ, ಅಲ್ಲಿ ಸೆಟ್ಗಳನ್ನು ಹಾಕಿ ಚಿತ್ರೀಕರಣ ಮಾಡಲಾಗಿದೆ. ಒಟ್ಟಾರೆ 250ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರಕ್ಕೆ ಚಿತ್ರೀಕರಣವಾಗಿರುವುದು ವಿಶೇಷ.
ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಸಂಗೀತವಿದೆ. ‘RRR’ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದ ಬಲ್ಗೇರಿಯಾ ಮೂಲದ ಟೊಡರ್ ಲ್ಯಾಜರೋವ್, ‘ಕಾಂತಾರ’ ಚಿತ್ರಕ್ಕೂ ಸಾಹಸ ನಿರ್ದೇಶನ ಮಾಡಿದ್ದಾರೆ.
‘ಕಾಂತಾರ – ಚಾಪ್ಟರ್ 1’ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಅಕ್ಟೋಬರ್ 02ರಂದು ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಇದನ್ನೂ ಓದಿ :-
ಹೆಚ್ಚಿನ ಓದಿಗಾಗಿ :-
[…] ಮುತ್ತಣ್ಣನ ಮಗನಾಗಲು ಪುಣ್ಯ ಮಾಡಿದ್ದರಂತೆ … […]
[…] ʻPEDDIʼಗಾಗಿ ರಾಮ್ ಚರಣ್ ಭರ್ಜರಿ ತಯಾರಿ … […]
[…] ʻPEDDIʼಗಾಗಿ ರಾಮ್ ಚರಣ್ ಭರ್ಜರಿ ತಯಾರಿ … […]
[…] ಮುತ್ತಣ್ಣನ ಮಗನಾಗಲು ಪುಣ್ಯ ಮಾಡಿದ್ದರಂತೆ … […]
https://the.hosting/it/help/zen-kernel