
Tharun Sudhir: ಮತ್ತೆ ಬಂದ ರಾಣ; ತರುಣ್ ಸುಧೀರ್ ನಿರ್ಮಾಣದ ಚಿತ್ರಕ್ಕೆ ನಾಯಕ
‘ಏಕ್ ಲವ್ ಯಾ’ ಚಿತ್ರದಲ್ಲಿ ನಾಯಕನಾಗಿದ್ದ ರಕ್ಷಿತಾ ಪ್ರೇಮ್ ಸಹೋದರ ರಾಣ, ಆ ನಂತರ ಯಾವೊಂದು ಚಿತ್ರದಲ್ಲೂ ನಟಿಸಿರಲಿಲ್ಲ. ವಿಜಯ್ ಈಶ್ವರ್ ನಿರ್ದೇಶನದ ಚಿತ್ರವೊಂದರಲ್ಲಿ ಅವರು ನಟಿಸುತ್ತಾರೆ ಎಂಬ ಸುದ್ದಿ ಇತ್ತಾದರೂ, ಚಿತ್ರ ಇದುವರೆಗೂ ಶುರುವಾಗಿಲ್ಲ. ಹೀಗಿರುವಾಗಲೇ, ರಾಣ ಹೊಸ ಚಿತ್ರದೊಂದಿಗೆ ವಾಪಸ್ಸಾಗುತ್ತಿದ್ದಾರೆ. ಈ ಬಾರಿ ರಾಣ, ತರುಣ್ ಸುಧೀರ್ ನಿರ್ಮಾಣದ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ‘ಕಾಟೇರ’ ಚಿತ್ರದ ನಂತರ ತರುಣ್ ಸುಧೀರ್, ಆಟ್ಲಾಂಟ ನಾಗೇಂದ್ರ ಅವರೊಂದಿಗೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಘೋಷಣೆ ಕಳೆದ…