
ದರ್ಶನ್ ಜೀವನ ಹಾಳು ಮಾಡಿಕೊಂಡ್ರು; ರಮ್ಯಾ ಬೇಸರ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ದರ್ಶನ್ ಬಗ್ಗೆ ರಮ್ಯಾ ಹಿಂದೊಮ್ಮೆ ಮಾತನಾಡಿ, ಅಭಿಮಾನಿಗಳಿಂದ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಈಗ ದರ್ಶನ್ ಬಗ್ಗೆ ಇನ್ನೊಮ್ಮೆ ಮಾತನಾಡಿರುವ ಅವರು, ದರ್ಶನ್ ಕಷ್ಟಪಟ್ಟು ಮೇಲೆ ಬಂದು ತಮ್ಮ ಜೀವನ ಹಾಳು ಮಾಡಿಕೊಂಡಿದ್ದಾರೆ ಎಂದು ಬೇಸರದಿಂದ ಹೇಳಿದ್ದಾರೆ. ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿರುವ ರಮ್ಯಾ, ‘ಸುಪ್ರೀಂ ಕೋರ್ಟ್ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ’ ಎಂದು ಹೇಳಿದರು. ದರ್ಶನ್ ಕುರಿತು ಮಾತನಾಡಿರುವ…