
Chikkanna; ಕರೊನಾ ಸಮಯದಲ್ಲಿ ಹುಟ್ಟಿಕೊಂಡ ತಾಯಿ-ಮಗನ ಕಥೆ ‘ಲಕ್ಷ್ಮೀಪುತ್ರ’
ಕೆಲವು ದಿನಗಳ ಹಿಂದೆ ಚಿಕ್ಕಣ್ಣ ಅಭಿನಯದಲ್ಲಿ ‘ಲಕ್ಷ್ಮೀಪುತ್ರ’ ಎಂಬ ಚಿತ್ರವನ್ನು ಘೋಷಿಸಿದ್ದರು ಎ.ಪಿ. ಅರ್ಜುನ್. ಈಗ ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ಬೆಂಗಳೂರಿನಲ್ಲಿ ನೆರವೇರಿದೆ. ನಾಗರಬಾವಿಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತವಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಎ.ಪಿ. ಅರ್ಜುನ್ ಫಿಲಂಸ್ ಅಡಿಯಲ್ಲಿ ಈ ಚಿತ್ರವನ್ನು ಅರ್ಜುನ್ ಪತ್ನಿ ನಿರ್ಮಿಸಿದರೆ, ಅರ್ಜುನ್ ಚಿತ್ರಗಳಿಗೆ ಕೆಲಸ ಮಾಡಿದ್ದ ವಿಜಯ್ ಸ್ವಾಮಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಎ.ಪಿ. ಅರ್ಜುನ್ ಕಥೆ ಬರೆದಿದ್ದಾರಂತೆ. ‘ಲಕ್ಷ್ಮೀಪುತ್ರ’ ಚಿತ್ರವು…