
ನಾವು ಭಿಕ್ಷೆ ಬೇಡುವಂತಹ ಪರಿಸ್ಥಿತಿಗೆ ಬಂದಿದ್ದೇವೆ: ವಿನೋದ್ ಪ್ರಭಾಕರ್
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರ ಕಳೆದ ವಾರ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಮೆಚ್ಚುಗೆ ಕೇಳಿಬಂದಿದೆ. ಆದರೆ, ಕಲೆಕ್ಷನ್ ಇಲ್ಲ ಎಂಬ ಕಾರಣಕ್ಕೆ ಹಲವು ಮಲ್ಟಿಪ್ಲೆಕ್ಸ್ಗಳಿಂದ ಚಿತ್ರವನ್ನು ಎತ್ತಂಗಡಿ ಮಾಡಲಾಗಿದೆ. ಕೆಲವು ಮಲ್ಟಿಪ್ಲೆಕ್ಸ್ಗಳಲ್ಲಿ ಚಿತ್ರವಿದ್ದರೂ, ಸರಿಯಾದ ಪ್ರದರ್ಶನ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಪ್ರಭಾಕರ್ ಮತ್ತು ಚಿತ್ರತಂಡದವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ದೂರು ಸಲ್ಲಿಸಿದ್ದಾರೆ. ನಂತರ ಮಾತನಾಡಿರುವ ವಿನೋದ್ ಪ್ರಭಾಕರ್, ‘ಒಂದಿಷ್ಟು ಮಲ್ಟಿಪ್ಲೆಕ್ಸ್ಗಳಲ್ಲಿ ಕಳೆದ ವಾರ ಎರಡು ಪ್ರದರ್ಶನ ಕೊಡಲಾಗಿತ್ತು. ಪ್ರದರ್ಶನಗಳ ಸಂಖ್ಯೆ ಕಡಿಮೆ…