ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘Eltuu Muthaa’

ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು ಟೀಸರ್‌ ಬಿಡಗುಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ….

Read More

Eltuu Muthaa – ನವಿಲು ಹಾಗೂ ಸರ್ಪದ ನಡುವಿನ ಸಂಘರ್ಷ

ನವಿಲು ಹಾಗೂ ಸರ್ಪದ ನಡುವೆ ನಡೆಯುವ ಸಂಘರ್ಷದ ಕಥೆ ‘ಎಲ್ಟು ಮುತ್ತಾ’ ಮುಗ್ದ ಸ್ವಭಾವದ ನವೀಲನ್ನು ಕೆಣಕಿದರೆ, ಅದು ಕೆರಳಿದರೆ,‌ ಆಗ ಕಾಳಿಂಗ ಸರ್ಪವನ್ನು ಕೊಲ್ಲುತ್ತದಂತೆ. ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಹೊಸಬರ ತಂಡವೊಂದು ಸದ್ದಿಲ್ಲದೆ ‘ಎಲ್ಟು ಮುತ್ತಾ’ (Eltuu Muthaa) ಎಂಬ ಚಿತ್ರವನ್ನು ಮಾಡಿ ಮುಗಿಸಿದೆ. ಕಳೆದ ವರ್ಷ ಪ್ರಾರಂಭವಾದ ಈ ಚಿತ್ರವು, ಇದೀಗ ಮುಕ್ತಾಯವಾಗಿದ್ದು, ಜುಲೈ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಕಥೆಯ ಸಾರ ಹೇಳುವ ಕೆಣಕು ನೋಟ ಇಲ್ಲಿದೆ..

Read More

‘ಸಾಲುಮರದ ತಿಮ್ಮಕ್ಕ’ನ ಪಾತ್ರದಲ್ಲಿ ನಟಿ ಸೌಜನ್ಯ …

ಕರ್ನಾಟಕದಲ್ಲಿ ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ಜೀವನ ಚರಿತ್ರೆ ಈಗ ಸಿನಿಮಾ ರೂಪದಲ್ಲಿ ಬರಲಿದೆ. ವೃಕ್ಷಗಳನ್ನೇ ಮಕ್ಕಳಾನ್ನಾಗಿ ಕಂಡು ಲೆಕ್ಕವಿಲ್ಲದಷ್ಟು ಮರಗಳನ್ನು ಬೆಳೆಸಿ ಪೋಷಿಸಿ ಇಡೀ ಜಗತ್ತಿಗೆ ಮಾದರಿಯಾಗಿರುವ ತಿಮ್ಮಕ್ಕನವರ ಕುರಿತ ಈ ಚಿತ್ರವನ್ನು ಶ್ರೀ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಲಕ್ಷ್ಮಿ ವೆಂಕಟೇಶ್ವರ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ಕುಮಾರ್ ಎಚ್.ಆರ್, ಸೌಜನ್ಯ ಡಿ.ವಿ, ಎ. ಸಂತೋಷ್ ಮುರಳಿ ಹಾಗೂ ಶ್ರೀ ನಿರ್ಮಾಣದ ಈ ಚಿತ್ರವು ಡಾ. ನೆಲ್ಲಿಕಟ್‍ಟೆ ಎಸ್. ಸಿದ್ದೇಶ್ ಅವರ…

Read More

ತೆರೆಗೆ ಬರಲು ‘X&Y’ ಸಜ್ಜು; ಜೂನ್‍ 26ರಂದು ಚಿತ್ರದ ಬಿಡುಗಡೆ

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ಈಗಾಗಲೇ ನಿರ್ದೇಶಕರಾಗಿ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಹೊಸದೊಂದು ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದು, ಆ ಚಿತ್ರವು ಜೂನ್‍ 26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಆ ಚಿತ್ರದ ಹೆಸರು ‘X&Y’. ಈ ಚಿತ್ರದಲ್ಲಿ ಸತ್ಯಪ್ರಕಾಶ್‍ ಆಟೋ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯಪ್ರಕಾಶ್‍. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ,…

Read More